ರಾಜ್ಯದಲ್ಲಿ ಕೊವಿಡ್-19 ಹೊಸ ಪ್ರಕರಣಗಳ ಶೇಕಡಾವಾರು ಪ್ರಮಾಣ 1.97%, ಸಾವಿನ ಪ್ರಮಾಣ ಶೇ.3.28%

ರಾಜ್ಯದಲ್ಲಿ ಕೊವಿಡ್-19 ಹೊಸ ಪ್ರಕರಣಗಳ ಶೇಕಡಾವಾರು ಪ್ರಮಾಣ 1.97%, ಸಾವಿನ ಪ್ರಮಾಣ ಶೇ.3.28%


ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಕ್ರಮೇಣ ಇಳಿಮುಖವಾಗುತ್ತಿದೆ. ರಾಜ್ಯದಲ್ಲಿ ಕೊವಿಡ್-19 ಹೊಸ ಪ್ರಕರಣಗಳ ಶೇಕಡಾವಾರು ಪ್ರಮಾಣ 1.97ರಷ್ಟಿದ್ದು, ಸಾವಿನ ಪ್ರಮಾಣ ಶೇ.3.28ರಷ್ಟಿದೆ.


ರಾಜ್ಯದಲ್ಲಿ ಕೊರೊನಾವೈರಸ್ ಸೋಂಕಿತ ಹೊಸ ಪ್ರಕರಣಗಳಿಗಿಂತ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 111 ಮಂದಿ ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ.


ಕಳೆದ 24 ಗಂಟೆಗಳಲ್ಲಿ 3382 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 12763 ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 76,505 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.


ಜಿಲ್ಲಾವಾರು ಪ್ರಕರಣಗಳು ಈ ರೀತಿ ಇದೆ



ಹೆಚ್ಚಿನ ಸುದ್ದಿಗಾಗಿ CLICK HERE


ದಕ ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ ಬಗ್ಗೆ ನಾಳೆ ಅಧಿಕೃತ ಆದೇಶ: ಸಚಿವ ಕೋಟ


ಬೆಳ್ತಂಗಡಿ, ಜೂ.30: ದ.ಕ. ಜಿಲ್ಲೆಯಲ್ಲಿ ಕೊರೋನ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್ಡೌನ್ ಸಡಿಲಿಕೆ ಮಾಡುವಂತೆ ಮುಖ್ಯಮಂತ್ರಿಯವರಲ್ಲಿ ವಿನಂತಿಸಲಾಗಿದೆ. ಗುರುವಾರ(ಜು.1) ಈ ಬಗ್ಗೆ ಸರಕಾರದ ಅಧಿಕೃತ ಆದೇಶ ಬರುವ ನಿರೀಕ್ಷೆಯಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.


ಕೊಕ್ಕಡದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚವರು, ಜಿಲ್ಲೆಯಲ್ಲಿ ಇದೀಗ ಕೊರೋನ ಪಾಸಿಟಿವಿಟಿ ರೇಟ್ ಐದರ ಕೆಳಗೆ ಬಂದಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಬೆಳಗ್ಗೆ ಏಳು ಗಂಟೆಯಿಂದ ಸಂಜೆ 5 ಗ‌ಂಟೆಯವರೆಗೆ ಅಂಗಡಿಗಳನ್ನು ತೆರೆಯಲು ಹಾಗೂ ಬಸ್ಸುಗಳ ಸಂಚಾರಕ್ಕೆ ಅವಕಾಶ ನೀಡಿ ಲಾಕ್ಡೌನ್ ಸಡಿಲಿಕೆ ಮಾಡಲಾಗುವುದು. ಈ ಬಗ್ಗೆ ಈಗಾಗಲೆ ನಿರ್ಧಾರ ತೆಗೆದುಕೊಳ್ಳಲಾಗಿದ್ದು ಇಂದು ಸಂಜೆ ಅಥವಾ ಗುರುವಾರ ಅಧಿಕೃತ ಆದೇಶ ಹೊರಬೀಳಲಿದೆ ಎಂದು ಅವರು ತಿಳಿಸಿದರು.


ಸೂಚನೆ- ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ. ಇದು ‌'ಈಗಿನ ಸುದ್ದಿ'ಯ ಕಳಕಳಿ

Previous Post Next Post