ರಾಜ್ಯದಲ್ಲಿ ಇಂದಿನಿಂದ ಬಸ್ ಸಂಚಾರ ಆರಂಭ, ಅರ್ಧರಾಜ್ಯ ಅನ್ ಲಾಕ್, 2 ತಿಂಗಳ ಮನೆ ವಾಸ ಅಂತ್ಯ

ರಾಜ್ಯದಲ್ಲಿ ಇಂದಿನಿಂದ ಬಸ್ ಸಂಚಾರ ಆರಂಭ, ಅರ್ಧರಾಜ್ಯ ಅನ್ ಲಾಕ್,  2 ತಿಂಗಳ ಮನೆ ವಾಸ ಅಂತ್ಯ 

 

ಬೆಂಗಳೂರು : ಅರ್ಧ 
ರಾಜ್ಯ ಅನ್ ಲಾಕ್ ಆಗಿದ್ದು, ಇಂದಿನಿಂದ 16 ಜಿಲ್ಲೆಗಳು ಫ್ರೀ ಡೌನ್ ಆಗಲಿದೆ. ಇಂದು ಬೆಳಗ್ಗೆ 6 ಗಂಟೆಯಿಂದ 16 ಜಿಲ್ಲೆಗಳು ಅನ್ ಲಾಕ್ ಆಗಲಿದೆ. ಬಸ್ ಸಂಚಾರ, ಜ್ಯುವೆಲ್ಲರಿ, ಅಂಗಡಿ ಮಳಿಗೆಗಳು ಸೇರಿದಂತೆ ವ್ಯಾಪಾರ ವಹಿವಾಟು ಇಂದಿನಿಂದ ಮತ್ತೆ ಶುರುವಾಗಲಿದೆ.



ರಾಜ್ಯದಲ್ಲಿ ಶೇ.5ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವಂತ 16 ಜಿಲ್ಲೆಗಳಲ್ಲಿ ಅನ್ ಲಾಕ್ ಮಾಡಲಾಗುತ್ತಿದೆ. ಇನ್ನುಳಿದಂತೆ ಪಾಸಿಟಿವಿಟಿ ದರಗಳು ಹೆಚ್ಚಿರುವಂತ 13 ಜಿಲ್ಲೆಗಳಲ್ಲಿ ಸೆಮಿ ಲಾಕ್ ಡೌನ್ ಮುಂದುವರೆಸಲಾಗುತ್ತಿದೆ.



ಜೊತೆಗೆ ಶೇ.50ರಷ್ಟು ಪ್ರಯಾಣಿಕರೊಂದಿಗೆ ಸಾರಿಗೆ ಸಂಚಾರ, ಹೋಟೆಲ್, ಬಾರ್ ಅಂಡ್ ರೆಸ್ಟೋರೆಂಟ್ ಗಳನ್ನು ಸಹ ಶೇ.50ರಷ್ಟು ಜನರೊಂದಿಗೆ ತೆರೆಯೋದಕ್ಕೂ ಅವಕಾಶ ನೀಡಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.


ಈ ಕುರಿತಂತೆ ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಕೋವಿಡ್ ಉಸ್ತುವಾರಿ ಸಚಿವರು, ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ ಶೇ.5ಕ್ಕಿಂತ ಕಡಿಮೆ ಪಾಸಿಟಿವ್ ದರ ಇದೆ. 13 ಜಿಲ್ಲೆಗಳಲ್ಲಿ 5-10 ಇದೆ. ಮೈಸೂರು ಜಿಲ್ಲೆಯಲ್ಲಿ 10ಕ್ಕಿಂತ ಹೆಚ್ಚು ಇದೆ. ಈ ಪಾಸಿಟಿವಿಟಿ ದರದ ಆಧಾರದ ಮೇಲೆ ನಿರ್ಭಂಧಗಳ ಸಡಿಲಿಕೆಯ ಆಧಾರ ಮೇಲೆ, ಶೇ.5ಕ್ಕಿಂತ ಕಡಿಮೆ ಇರುವ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ ಸೇರಿದಂತೆ ಗದಗ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ, ಈ ಕೆಳಕಂಡಂತೆ ಸಡಿಲಿಕೆ ಮಾಡಲು ತೀರ್ಮಾನಿಸಿದ್ದಾರೆ.


ರಾಜ್ಯದಲ್ಲಿ ಅನ್ ಲಾಕ್ ಗೆ ಕೌಂಟ್ ಡೌನ್ ಶುರು : ಇಂದಿನಿಂದ 16 ಜಿಲ್ಲೆಗಳು ಫ್ರೀ ಡೌನ್..ಏನಿರುತ್ತೆ, ಏನಿರಲ್ಲ..! ಎಂಬುವುದನ್ನು ನೋಡುವುದಾದರೆ


>ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ ಅವಕಾಶ

>ಎಲ್ಲಾ ಅಂಗಡಿಗಳನ್ನು ಬೆಳಗ್ಗೆಯಿಂದ ಸಂಜೆ 5 ಗಂಟೆವರೆಗೆ ತೆರಯಲು ಅವಕಾಶ

>ರಾಜ್ಯಾದ್ಯಂತ ಕೆ ಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್

>ಮದ್ಯಪಾನ ಹೊರತುಪಡಿಸಿ ಹೋಟೆಲ್ ಗಳನ್ನು ತೆರೆಯಲು ಅವಕಾಶವಿದೆ

>ಬಸ್, ಮೆಟ್ರೋ ಸಂಚಾರ ಇರಲಿದೆ, ಆದರೆ 50 % ಪ್ರಯಾಣಿಕರಿಗೆ ಮಾತ್ರ ಅವಕಾಶ

>ಎಲ್ಲಾ ಅಂಗಡಿಗಳನ್ನು ಬೆಳಗ್ಗೆಯಿಂದ ಸಂಜೆ 5 ಗಂಟೆವರೆಗೆ ತೆರೆಯಲು ಅವಕಾಶ

>ಎಸಿ ಚಾಲನೆ ಇಲ್ಲದೇ ಹೋಟೆಲ್, ಕ್ಲಬ್, ರೆಸ್ಟೊರೆಂಟ್ ಓಪನ್

>ಹೊರಾಂಗಣ ಚಿತ್ರೀಕರಣಕ್ಕೆ ಅನುಮತಿ

>ಬಸ್, ಮೆಟ್ರೋ ಸಂಚಾರಕ್ಕೆ ಅವಕಾಶ

>ವೀಕ್ಷಕರಿಲ್ಲದೇ ಹೊರಾಂಗಣ ಕ್ರೀಡೆ

>ಸರ್ಕಾರಿ, ಖಾಸಗಿ ಕಚೇರಿ ಶೇಕಡ 50 ರಷ್ಟು ಸಿಬ್ಬಂದಿ ಕಾರ್ಯನಿರ್ವಹಣೆ

>ಲಾಡ್ಜ್, ರೆಸಾರ್ಟ್ ಗಳಲ್ಲಿ ಶೇಕಡ 50 ಸಾಮರ್ಥ್ಯ

>ಹೊರಾಂಗಣ ಕ್ರೀಡೆಗೆ ಅವಕಾಶ, ಆದರೆ ವೀಕ್ಷಕರ ಪ್ರವೇಶ ನಿರ್ಬಂಧ


ಶೇ.5ಕ್ಕಿಂತ ಹೆಚ್ಚು ಇರುವಂತ 13 ಜಿಲ್ಲೆಗಳಾದಂತ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಧಾರವಾಡ, ಕೊಡಗು ಬಳ್ಳಾರಿ, ಚಿತ್ರದುರ್ಗ, ವಿಜಯಪುರ ಜಿಲ್ಲೆಗಳಲ್ಲಿ ದಿನಾಂಕ 11-06-2021ರ ಆದೇಶವೇ ಮುಂದುವರೆಯಲಿದೆ ಎಂದು ತಿಳಿಸಿದರು.


ಶೇ.10ಕ್ಕಿಂತ ಹೆಚ್ಚಿರುವಂತ ಮೈಸೂರು ಜಿಲ್ಲೆಯಲ್ಲಿ ಈಗ ಇರುವಂತ ನಿಬಂಧನೆಗಳು ಯಥಾಸ್ಥಿತಿ ಮುಂದುವರೆಯಲಿದೆ. ರಾಜ್ಯಾಧ್ಯಂತ ನೈಟ್ ಕರ್ಪ್ಯೂ, ವಾರಾಂತ್ಯ ಕರ್ಪ್ಯೂ ಹಾಗೆಯೇ ಮುಂದುವರೆಯಲಿದೆ. ಬಸ್ ಸಂಚಾರ ಶೇ.50ರಷ್ಟು ಪ್ರಯಾಣಿಕರಿಗೆ ಮಿತಿಗೊಳಿಸಿ, ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಇಡೀ ರಾಜ್ಯದಲ್ಲಿ ನಿರ್ಬಂಧಿಸಿರುವಂತ ಚಟುವಟಿಕೆಗಳು, ಈಜುಕೊಳ, ಸಭೆ ಸಮಾರಂಭ, ಪೂಜಾ ಸ್ಥಳ, ಶಾಫಿಂಗ್ ಮಾಲ್, ಅಮ್ಯೂಸ್ ಮೆಂಟ್ ಪಾರ್ಕ್, ಪಬ್ ಗಳಿಗೆ ನಿರ್ಬಂಧಿಸಲಾಗಿದೆ. ಈ ಆದೇಶವು ಜುಲೈ.5ರವರೆಗೆ ಜಾರಿಯಲ್ಲಿರಲಿದ್ದು, ಅಲ್ಲಿಯವರೆಗೆ ವಾರಾಂತ್ಯ ಹಾಗೂ ನೈಟ್ ಕರ್ಪ್ಯೂ ಮುಂದುವರೆಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.



ಸೂಚನೆ: ಅನ್ ಲಾಕ್ ಹೌದು ಎಚ್ಚರಿಕೆ ಅಗತ್ಯ, ಅನಗತ್ಯ ಓಡಾಟ ಬೇಡ, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ 
Previous Post Next Post