ಇಂದು ಅನ್ಲಾಕ್ 3.O ಕುರಿತು ಸಿಎಂ ಮಹತ್ವದ ಸಭೆ, ಮತ್ತಷ್ಟು ನಿರ್ಭಂದ ಸಡಿಲಿಕೆ ಸಾದ್ಯತೆ

ಇಂದು ಅನ್ಲಾಕ್ 3.O ಕುರಿತು ಸಿಎಂ ಮಹತ್ವದ ಸಭೆ, ಮತ್ತಷ್ಟು ನಿರ್ಭಂದ ಸಡಿಲಿಕೆ ಸಾದ್ಯತೆ


ರಾಜ್ಯದಲ್ಲಿ ಕೊರೋನಾವೈರಸ್ ಅಟ್ಟಹಾಸ ಕೊಂಚ ನಿಯಂತ್ರಣಕ್ಕೆ ಬರುತ್ತಿದೆ. ಹೀಗಾಗಿ, ಈಗಾಗಲೇ ಅನೇಕ ಜಿಲ್ಲೆಗಳಲ್ಲಿ ಲಾಕ್​ಡೌನ್ ತೆರವುಗೊಳಿಸಲಾಗಿದೆ. ಆದರೂ ಮುನ್ನೆಚ್ಚರಿಕಾ ಕ್ರಮವಾಗಿ ಕೆಲವು ನಿರ್ಬಂಧಗಳನ್ನು ಹೇರಲಾಗಿದ್ದು, ನೈಟ್ ಕರ್ಫ್ಯೂ (Night Curfew), ವೀಕೆಂಡ್ ಕರ್ಫ್ಯೂ (Weekend Curfew) ಮುಂತಾದ ನಿಯಮಗಳು ಇನ್ನೂ ಜಾರಿಯಲ್ಲಿವೆ. ರಾಜ್ಯ ಸರ್ಕಾರ ಸೋಮವಾರದಿಂದ 3ನೇ ಹಂತದ ಅನ್​ಲಾಕ್ (Unlock 3.0) ಪ್ರಕ್ರಿಯೆಗೆ ಚಿಂತನೆ ನಡೆಸಿದ್ದು, ಈ ಬಗ್ಗೆ ಇಂದು ನಿರ್ಧಾರವಾಗುವ ಸಾಧ್ಯತೆಯಿದೆ.


ಕರ್ನಾಟಕದಲ್ಲಿ ಮೂರನೇ ಹಂತದ ಲಾಕ್​ಡೌನ್ ಸಡಿಲಿಕೆ ಕುರಿತು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಭೆ ನಡೆಸಲಿದ್ದಾರೆ. ಅನ್​ಲಾಕ್ 3.O ಬಗ್ಗೆ ಚರ್ಚೆ ನಡೆಸಲು ಸಚಿವರ ಜೊತೆ ನಿನ್ನೆ ಸಂಜೆ ಸಿಎಂ ಸಭೆ ನಿಗದಿಯಾಗಿತ್ತು. ಆದರೆ, ಆ ಸಭೆಯನ್ನು ಇಂದಿಗೆ ಮುಂದೂಡಲಾಗಿದೆ.


ಇಂದು ಅನ್​ಲಾಕ್ 3.0 ಬಗ್ಗೆ ಕೊರೋನಾ ಉಸ್ತುವಾರಿ ಸಚಿವರು, ಹಿರಿಯ ಸಚಿವರ ಜೊತೆ ಮುಖ್ಯಮಂತ್ರಿ ಯಡಿಯೂರಪ್ಪ ಸಭೆ ನಡೆಸಲಿದ್ದಾರೆ. ಕರ್ನಾಟಕದಲ್ಲಿ ಕೊರೋನಾ ಜೊತೆಗೆ ಬ್ಲಾಕ್ ಫಂಗಸ್, ವೈಟ್ ಫಂಗಸ್, ಡೆಲ್ಟಾ ಪ್ಲಸ್ ಮುಂತಾದ ಇತರೆ ರೋಗಗಳು ಕೂಡ ಪತ್ತೆಯಾಗುತ್ತಿವೆ. ಈಗಾಗಲೇ 2 ಹಂತದ ಲಾಕ್​ಡೌನ್ ತೆರವುಗೊಳಿಸಲಾಗಿದ್ದು, ಸರ್ಕಾರಿ ಬಸ್ ಸಂಚಾರ, ರೆಸ್ಟೋರೆಂಟ್, ಕಚೇರಿಗಳು, ಬಾರ್​ಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಜುಲೈ 5ರಿಂದ ರಾಜ್ಯದಲ್ಲಿ ಸಂಪೂರ್ಣ ಅನ್​ಲಾಕ್ ಘೋಷಣೆ ಮಾಡಲು ಸರ್ಕಾರ ಚಿಂತನೆ ನಡೆಸಿದ್ದು, ಈ ಬಗ್ಗೆ ಇಂದಿನ ಸಭೆಯ ಬಳಿಕ ನಿರ್ಧಾರವಾಗಲಿದೆ. ಸೋಮವಾರದಿಂದ ಕರ್ನಾಟಕದಲ್ಲಿ ಸಂಪೂರ್ಣವಾಗಿ ಲಾಕ್​ಡೌನ್ ತೆರವುಗೊಳಿಸುವ ಸಾಧ್ಯತೆಗಳು ಹೆಚ್ಚಾಗಿವೆ.


ಆದರೆ, ಕೊರೋನಾ ತಜ್ಞರ ಸಮಿತಿ, ನೆರೆಯ ರಾಜ್ಯಗಳಲ್ಲಿ ಕೊರೋನಾ ಹಾವಳಿ ಹೆಚ್ಚಾಗಿದೆ. ಹೀಗಾಗಿ, ಕರ್ನಾಟಕದಲ್ಲಿ ಸಂಪೂರ್ಣವಾಗಿ ಅನ್​ಲಾಕ್ ಘೋಷಿಸಿದರೆ ಮುಂದೆ ಮತ್ತೆ ಕೊರೋನಾ ಹೆಚ್ಚಾಗುವ ಸಾಧ್ಯತೆಯಿದೆ. ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂಗಳನ್ನಾದರೂ ಮುಂದುವರೆಸುವುದು ಉತ್ತಮ. ಹಾಗೇ, ಹೊರ ರಾಜ್ಯಗಳಿಂದ ಬರುವವರ ಮೇಲೆ ನಿಗಾ ಇಡುವುದು ಒಳ್ಳೆಯದು ಎಂದು ಸಲಹೆ ನೀಡಿದ್ದಾರೆ ಎನ್ನಲಾಗಿದೆ.


ಡೆಲ್ಟಾ ಪ್ಲಸ್ ಆತಂಕ: ತಲಪಾಡಿಯಲ್ಲಿ ತೀವ್ರಗೊಂಡ ತಪಾಸಣೆ

ಮಂಗಳೂರು: ಕೇರಳದಲ್ಲಿ ಡೆಲ್ಟಾ ಪ್ಲಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕರ್ನಾಟಕ- ಕೇರಳ ಗಡಿಯಲ್ಲಿ ಇನ್ನಷ್ಟು ಕಟ್ಟುನಿಟ್ಟಿನ ತಪಾಸಣೆ ಮಾಡಲಾಗುತ್ತಿದೆ. ಮಂಗಳೂರಿನ ತಲಪಾಡಿ ಗಡಿಯಲ್ಲಿ ಪೊಲೀಸರು ತಪಾಸಣೆ ತೀವ್ರಗೊಳಿಸಿದ್ದು, ಕೇರಳದಿಂದ ಆಗಮಿಸುವ ಎಲ್ಲಾ ವಾಹನಗಳ ತೀವ್ರ ತಪಾಸಣೆ ಮಾಡಲಾಗುತ್ತಿದೆ.


ಗಡಿಯಲ್ಲಿ ಪೊಲೀಸರ ವಾಹನ ತಪಾಸಣೆಯಿಂದ ವಾಹನಗಳು ಸಾಲು ನಿಂತಿದ್ದು, 72 ಗಂಟೆಗಳ ಒಳಗಿನ ನೆಗೆಟಿವ್ ರಿಪೋರ್ಟ್ ಇಲ್ಲದವರಿಗೆ ಗಡಿಯಲ್ಲೇ Random ಟೆಸ್ಟ್ ಮಾಡಲಾಗುತ್ತಿದೆ. ಆರೋಗ್ಯ ಇಲಾಖೆಯ ಎರಡು ತಂಡದಿಂದ ಗಡಿಯಲ್ಲಿ Random ಟೆಸ್ಟ್ ಮಾಡಲಾಗುತ್ತಿದೆ.


ನಿತ್ಯ ಉದ್ಯೋಗ, ವ್ಯವಹಾರಕ್ಕೆ ಬರುವವರಿಗೆ ಇಂದಿನಿಂದ 15 ದಿನಗಳಿಗೊಮ್ಮೆ ರಿಪೋರ್ಟ್ ಸಲ್ಲಿಕೆ ಕಡ್ಡಾಯವಾಗಿದ್ದು, ತಲಪಾಡಿ ಗಡಿಯಲ್ಲಿ ಬೈಕ್, ಕಾರುಗಳ ತೀವ್ರ ತಪಾಸಣೆಯನ್ನು ಪೊಲೀಸರು ಮಾಡುತ್ತಿದ್ದಾರೆ. ರಿಪೋರ್ಟ್ ಇಲ್ಲದೇ ಮಂಗಳೂರು ಪ್ರವೇಶಕ್ಕೆ ಪೊಲೀಸರು ತಡೆ ಮಾಡಿದ್ದು, ಟೆಸ್ಟ್ ಮಾಡಿಸಿದ ಬಳಿಕವೇ ಮಂಗಳೂರಿಗೆ ಹೋಗಲು ಅವಕಾಶ ಕಲ್ಪಿಸಲಾಗಿದೆ.


ಹೆಚ್ಚಿನ ಸುದ್ದಿಗಾಗಿ Click Here

Previous Post Next Post