ಸಹಜ ಸ್ಥಿತಿಯತ್ತ ಕರ್ನಾಟಕ, ಇಂದಿನಿಂದ ಅನ್ ಲಾಕ್ 3.O ಮಾರ್ಗಸೂಚಿ ಜಾರಿ, ಕರುನಾಡಿಗೆ ಜಡಿದ ಬೀಗ ಭಾಗಶಃ ತೆರವು

ಸಹಜ ಸ್ಥಿತಿಯತ್ತ ಕರ್ನಾಟಕ, ಇಂದಿನಿಂದ ಅನ್ ಲಾಕ್ 3.O ಮಾರ್ಗಸೂಚಿ ಜಾರಿ, ಕರುನಾಡಿಗೆ ಜಡಿದ ಬೀಗ ಭಾಗಶಃ ತೆರವು 


 


ಬೆಂಗಳೂರು: ಕೊಡಗು ಮತ್ತು ಹಾಸನ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದಾದ್ಯಂತ ಇಂದು ಬೆಳಿಗ್ಗೆಯಿಂದ ಲಾಕ್‌ಡೌನ್‌ ಸಡಿಲಿಕೆಯ ಮೂರನೇ ಹಂತ ಜಾರಿಗೆ ಬರಂದಿದೆ. ಮಸೀದಿ, ದೇವಸ್ಥಾನ, ಮಾಲ್‌ ತೆರೆಯಲು ಅವಕಾಶ ದೊರೆಯಲಿದ್ದು, ಬಹುತೇಕ ನಿರ್ಬಂಧಗಳು ರದ್ದಾಗಲಿವೆ. ಕೊವಿಡ್ ಎರಡನೇ ಅಲೆಯು ರಾಜ್ಯವ್ಯಾಪಿ ಹರಡಿದ ಕಾರಣದಿಂದ ಮೇ 10ರಂದು ಲಾಕ್‌ಡೌನ್‌ ಜಾರಿಗೊಳಿಸಲಾಗಿತ್ತು.


ಇಂದು (ಜುಲೈ 5) ಬೆಳಿಗ್ಗೆ 5 ಗಂಟೆಯಿಂದ ಇದೇ 19ರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಗೆ ಬರುವಂತೆ ಈ ಕೆಳ ಕಾಣಿಸಿದ ಸಡಿಲಿಕೆಗಳು ಮತ್ತು ನಿರ್ಬಂಧಗಳು ಜಾರಿಯಲ್ಲಿ ಇರುತ್ತವೆ.


ಯಾವುದೆಲ್ಲಾ ಇರುತ್ತೆ...

> ಸರ್ಕಾರಿ ಹಾಗೂ ಖಾಸಗಿ ಕಚೇರಿಗಳು ಶೇ.100 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.


> ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳಿಗೆ ಸಂಪೂರ್ಣ ಅವಕಾಶ ನೀಡಲಾಗಿದೆ.ಶೇ.100 ರಷ್ಟು ಸಿಬ್ಬಂದಿಗಳೊಂದಿಗೆ ಕೆಲಸ ಮಾಡಲು ಅವಕಾಶ ಇದೆ.


> ಶಾಪಿಂಗ್‌ ಮಾಲ್‌ಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ


> ಮೆಟ್ರೊ ಸೇರಿದಂತೆ ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ಖಾಸಗಿ ಹಾಗೂ ಸಾರ್ವಜನಿಕ ಸಾರಿಗೆಯಲ್ಲಿ ಶೇ.100 ರಷ್ಟು ಪ್ರಯಾಣಿಕರೊಂದಿಗೆ ಸಂಚರಿಸಲು ಅವಕಾಶ ಮಾಡಿಕೊಡಲಾಗಿದೆ


> ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ


> ಈಜುಕೊಳಗಳಲ್ಲಿ ಕ್ರೀಡಾಪಟುಗಳು ಅಭ್ಯಾಸ ಮಾಡಬಹುದು


> ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ


> ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿ ಇರುವುದಿಲ್ಲ


> ಬಾರ್‌ಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ


ಯಾವುದಕ್ಕೆ ಮಿತಿ...

> ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ


> ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಮಾತ್ರ ಅವಕಾಶ


> ಕೋವಿಡ್‌ ಕರ್ಫ್ಯೂ (ನೈರ್ಟ್ ಕರ್ಫ್ಯೂ) ರಾತ್ರಿ 9.00 ರಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ


ಯಾವುದಕ್ಕೆ ಅವಕಾಶ ಇಲ್ಲ...


> ಚಿತ್ರಮಂದಿರಗಳನ್ನು ತೆರೆಯಲು ಅವಕಾಶವಿಲ್ಲ


> ಸಾಮಾಜಿಕ, ಧಾರ್ಮಿಕ, ರಾಜಕೀಯ ಸಭೆ ಸಮಾರಂಭ, ಪ್ರತಿಭಟನೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶ ಇರುವುದಿಲ್ಲ


> ಪಬ್‌ಗಳನ್ನು ತೆರೆಯಲು ಅನುಮತಿ ನೀಡಲಾಗಿಲ್ಲ


ಇತರೆ...

> ಜಿಲ್ಲೆಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಆಯಾ ಜಿಲ್ಲಾಡಳಿತಗಳು ಇನ್ನೂ ಹೆಚ್ಚಿನ ನಿರ್ಬಂಧಗಳು ಅವಶ್ಯವಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲು ಸರ್ಕಾರ ಸೂಚಿಸಿದೆ


> ಕೋವಿಡ್-19 ನಿಯಂತ್ರಿಸುವ ದೃಷ್ಟಿಯಿಂದ ಸಾರ್ವಜನಿಕರು ನಿಯಂತ್ರಣ ಕ್ರಮಗಳಾದ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಅಂತರ ಕಾಪಾಡುವುದು, ವೈಯಕ್ತಿಕ ಮತ್ತು ಸಾಮಾಜಿಕ ಸ್ವಚ್ಛತೆ ಕಡೆಗೆ ಗಮನ ನೀಡಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸರ್ಕಾರ ಮನವಿ ಮಾಡಿದೆ


ಸೂಚನೆ: ರಾಜ್ಯ ಅನ್ ಲಾಕ್ ಆಗಿದೆ, ಜಾಗ್ರತೆ ನಮ್ಮ ಹೊಣೆ, ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ, ಮಾಸ್ಕ್ ಧರಿಸಿ ಅಂತರ ಕಾಪಾಡಿ, ಇದು 'ಈಗಿನ ಸುದ್ದಿ'ಯ ಕಳಕಳಿ 

Previous Post Next Post