ವೀಕೆಂಡ್ ಕರ್ಫ್ಯೂ, ದಕ ಜಿಲ್ಲೆಯ ಜನರಿಗೆ ಈ ನಿಯಮ ಪಾಲನೆ ಕಡ್ಡಾಯ

ರಾಜ್ಯದಲ್ಲಿ ವಿಕೆಂಡ್ ಕರ್ಫ್ಯೂ ಜಾರಿಯಲ್ಲಿದೆ. ಮರೆಯಬೇಡಿ


ವೀಕೆಂಡ್ ಕರ್ಫ್ಯೂ, ದಕ ಜಿಲ್ಲೆಯ ಜನರಿಗೆ ಈ ನಿಯಮ ಪಾಲನೆ ಕಡ್ಡಾಯ

ಬೆಂಗಳೂರು : ಈಗಾಗಲೇ ಕೊರೋನಾ ಸೋಂಕಿನ ಪ್ರಕರಣಗಳಲ್ಲಿ ಪಾಸಿಟಿವಿಟಿ ದರ ಇಳಿಕೆ ಕಂಡ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಅನ್ ಲಾಕ್ 2.0 ಮಾರ್ಗಸೂಚಿ ಕ್ರಮಗಳನ್ನು ಜಾರಿಗೊಳಿಸಲಾಗಿ ದ್ದು, ಪಾಸಿಟಿವಿಟಿ ದರ ಇಳಿಕೆಗೊಂಡಂತ ದಕ್ಷಿಣ ಕನ್ನಡ ಜಿಲ್ಲೆಗೂ ಬಿಗ್ ರಿಲೀಫ್ ಕೊಟ್ಟಿದ್ದು , ನಿನ್ನೆ ಅನ್ ಲಾಕ್ 2.0 
ಮಾರ್ಗಸೂಚಿ ಕ್ರಮ ಜಾರಿಗೊಳಿಸಿದೆ.


ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಯಾಲ್ಲಿದ್ದು, ಅಗತ್ಯ ವಸ್ತುಗಳ ಅಂಗಡಿಗಳು ಶನಿವಾರ ಮತ್ತು ಭಾನುವಾರ ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆವರೆಗೆ ತೆರೆದಿರಲಿವೆ. ಉಳಿದ ಯಾವುದೇ ಚಟುವಟಿಕೆಗಳಿಗೆ, ಅಂಗಡಿಗಳಿಗೆ ಅವಕಾಶವಿಲ್ಲ. ಶನಿವಾರ ಮತ್ತು ರವಿವಾರ ವೀಕೆಂಡ್ ಕರ್ಫ್ಯೂ ಸಮಯದಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ದಿನಸಿ, ತರಕಾರಿ, ಹಾಲು, ಹಣ್ಣು ಮೀನು, ಮಾಂಸ ಅಂಗಡಿಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ, ದಕ್ಷಿಣ ಕನ್ನಡ ಜಿಲ್ಲೆಯ ಜನರನ್ನು ಈ ನಿಯಮವನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದು ಎಂದು ಜಿಲ್ಲಾಡಳಿತ ತಿಳಿಸಿದೆ.
Previous Post Next Post