ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ 1 ರಿಂದ ದ್ವಿತೀಯ ಪಿಯುಸಿ ತರಗತಿ ಆರಂಭ, ಮಾರ್ಗಸೂಚಿ ಪ್ರಕಟ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ 1 ರಿಂದ ದ್ವಿತೀಯ ಪಿಯುಸಿ ತರಗತಿ ಆರಂಭ, ಮಾರ್ಗಸೂಚಿ ಪ್ರಕಟ

ಮಂಗಳೂರು, ಆ.28: ದ.ಕ.ಜಿಲ್ಲೆಯಲ್ಲಿ ಸೆ.1ರಿಂದ ದ್ವಿತೀಯ ಪಿಯು ಕಾಲೇಜುಗಳ ಭೌತಿಕ ತರಗತಿಗಳನ್ನು ಆರಂಭಿಸಲು ದ.ಕ. ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ.


ಪ್ರಥಮ ಪಿಯು ತರಗತಿಯನ್ನು ಪಿಯು ಡಿಡಿ ಹಾಗೂ ಪದವಿ/ಸ್ನಾತಕೋತ್ತರ ಭೌತಿಕ ತರಗತಿಗಳನ್ನು ಕಾಲೇಜಿನ ಜಂಟಿ ನಿರ್ದೇಶಕರ ಪೂರ್ವಾನುಮತಿ ಪಡೆದು ಸೆ.15ರ ಬಳಿಕ ತರಗತಿ ಆರಂಭಿಸುವ ಬಗ್ಗೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.



ಸಪ್ಟೆಂಬರ್1 ರಿಂದ ಜಿಲ್ಲೆಯ ದ್ವಿತೀಯ ಪಿಯು ತರಗತಿಗಳನ್ನು ತೆರೆಯಲು ಜಿಲ್ಲಾಡಳಿತ ನಿರ್ಧಾರ ಮಾಡಿದೆ. ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಅವಲೋಕಿಸಿ ಜಿಲ್ಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ದ್ವಿತೀಯ ಪಿಯುಸಿಗೆ ಭೌತಿಕ ತರಗತಿಗಳನ್ನು ಪ್ರಾರಂಭಿಸುವುದು ಸೂಕ್ತ ಎಂದು ಮನಗಂಡು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಹಲವು ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ.


ಮಾರ್ಗ ಸೂಚಿಗಳು ಈ ಕೆಳಗಿನಂತಿವೆ;

1. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ದಿನಾಂಕ: 01-09-2021 ರಿಂದ ದ್ವಿತೀಯ ಪಿಯುಸಿ ಭೌತಿಕ ತರಗತಿಗಳನ್ನು ಪ್ರಾರಂಭಿಸಲು ಅನುಮತಿಸಿದೆ.


2. ಲಗ್ತ ಪ್ರಮಾಣಿತ ಕಾರ್ಯಾಚರಣಾ ವಿಧಾನ (SOP) ಯನ್ನು ಕಾಲೇಜುಗಳಲ್ಲಿ ಅನುಷ್ಠಾನಗೊಳಿಸುವ ಸಂಪೂರ್ಣಜವಾಬ್ದಾರಿಯನ್ನು ಆಯಾ ಕಾಲೇಜಿನ ಪ್ರಾಂಶುಪಾಲರಿಗೆ ವಹಿಸಲಾಗಿದೆ.


3. ಕೇರಳ ರಾಜ್ಯದಿಂದ ಬರುವಂತಹ ವಿದ್ಯಾರ್ಥಿಗಳನ್ನು 7 ದಿನಗಳ ಕಾಲ ಕ್ವಾರಂಟೈನ್‌ನಲ್ಲಿರಿಸಲು ಹಾಗೂ ಕೋವಿಡ್ ಸೋಂಕು ದೃಢಪಟ್ಟ ವಿದ್ಯಾರ್ಥಿಗಳಿಗೆ ವೈದ್ಯಕೀಯ ಆರೈಕೆ ಕಲ್ಪಿಸಲು ಅನುಕೂಲವಾಗುವಂತೆ ವಸತಿ ಸಹಿತ ಕಾಲೇಜುಗಳಲ್ಲಿ ತಮ್ಮದೇ ಆದ ಪ್ರತ್ಯೇಕ ಪ್ರಶಸ್ತವಾದ ಸಕಲ ವ್ಯವಸ್ಥೆಯುಳ್ಳ ಕೋವಿಡ್ ಕೇರ್ ಸೆಂಟರ್ ಗಳನ್ನು ಕಡ್ಡಾಯವಾಗಿ ತೆರೆಯಲು ಕ್ರಮವಹಿಸುವುದು ಕ್ವಾರಂಟೈನ್ ನಲ್ಲಿರಿಸಿದ ವಿದ್ಯಾರ್ಥಿಗಳು 7 ದಿನಗಳ ನಂತರ RT-PCR ಟೆಸ್ಟ್ ಮಾಡಿಸಿ, ನೆಗಟಿವ್ ಪ್ರಮಾಣ ಪತ್ರದೊಂದಿಗೆ ತರಗತಿಗೆ ಹಾಜರಾಗುವುದು, ಜ್ವಾಲೆಂಟೈನ್ ನಲ್ಲಿರಿಸಿದ ವಿದ್ಯಾರ್ಥಿಗಳು ಕೋವಿಡ್ ಕೇರ್ ಸೆಂಟರ್ ನಿಂದಲೇ ಆನ್ ಲೈನ್ ತರಗತಿಯಲ್ಲಿ ಭಾಗವಹಿಸುವಂತೆ ಕ್ರಮ ವಹಿಸುವುದು,


4. ಕೇರಳ ರಾಜ್ಯದಿಂದ ದಿನಂಪ್ರತಿ ಬರುವಂತಹ ವಿದ್ಯಾರ್ಥಿಗಳು ಪ್ರತೀ 7 ದಿನಗಳಿಗೊಮ್ಮೆ RT-CR ಟೆಸ್ಟ್ ಮಾಡಿಸಿ, ನೆಗೆಟಿವ್ ಪ್ರಮಾಣ ಪತ್ರದೊಂದಿಗೆ ಹಾಜರಾಗುವುದು.


5. ಕೇರಳ ರಾಜ್ಯದಿಂದ ದಿನಂಪ್ರತಿ ಬರುವಂತಹ ಬೋಧಕ ಬೋಧಕೇತರ ಸಿಬ್ಬಂದಿಗಳು ಕೋವಿಡ್ ಲಸಿಕೆ (2 ಡೋಸ್) ಪಡೆದಿದ್ದರೂ ಕೂಡಾ ಪ್ರತಿ 7 ದಿನಗಳಿಗೊಮ್ಮೆ RTICR ಟೆಸ್ಟ್ ಮಾಡಿಸಿ ನೆಗೆಟಿವ್‌ ಪ್ರಮಾಣ ಪತ್ರದೊಂದಿಗೆ ಹಾಜರಾಗುವುದು.


6. ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿಗಳು RTPCR ಟೆಸ್ಟ್ ಮಾಡಿಸಿ, ನೆಗಟಿವ್ ಪ್ರಮಾಣ ಪತ್ರದೊಂದಿಗೆ ಹಾಜರಾಗುವುದು.


7. ವಸತಿ ನಿಲಯದ ಹಾಗೂ ಸ್ಥಳೀಯ ವಿದ್ಯಾರ್ಥಿಗಳಿಗೆ ಪ್ರತ್ಯೇಕ ತರಗತಿಗಳನ್ನು ನಡೆಸುವುದು.


8. ಸರಕಾರದ ಪ್ರಮಾಣಿತ ಕಾರ್ಯಾಚರಣಾ ವಿಧಾನವು (SOP) ಪರಿಪಾಲನೆ ಆಗುತ್ತಿರುವ ಬಗ್ಗೆ ಮೇಲ್ವಿಚಾರಣೆ ನಡೆಸಲು ಉಪ ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ, ಮಂಗಳೂರು (ಸಂಪೂರ್ಣ ಮೇಲ್ವಿಚಾರಣೆ),ತಾಲೂಕು ಆರೋಗ್ಯಾಧಿಕಾರಿಗಳು,ಕಾಲೇಜು ಪ್ರಾಂಶುಪಾಲರುಗಳು ಒಳಗೊಂಡ ಪರಿಶೀಲನಾ ತಂಡವನ್ನು ರಚಿಸಲಾಗಿದೆ


9. ಪ್ರಥಮ ಪಿಯುಸಿಗೆ ಸಂಬಂಧಿಸಿ ವಿದ್ಯಾರ್ಥಿಗಳ ನೋಂದಣಿ ಪ್ರಕ್ರಿಯೆ ಮುಕ್ತಾಯವಾದ ಬಳಿಕ ವಿದ್ಯಾಸಂಸ್ಥೆಯ ಮುಖ್ಯಸ್ಥರು ಉಪನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ ಯಿಂದ ಪೂರ್ವಾನುಮತಿ ಪಡೆದು ಸೆಪ್ಟೆಂಬರ್ 15 ರಿಂದ ತರಗತಿಪ್ರಾರಂಭಿಸುವುದು. (ಸರಕಾರದ SOP ನಿಬಂಧನೆಗೆ ಒಳಪಟ್ಟು)


10. ಪದವಿ ಹಾಗೂ ಸ್ನಾತ್ತಕೋತರ ತರಗತಿ ಪ್ರಾರಂಭಕ್ಕೂ ಮುನ್ನ ಸಂಬಂಧಿಸಿದ ಶಿಕ್ಷಣ ಸಂಸ್ಥೆಗಳು ಕೋವಿಡ್ ನಿಯಂತ್ರಣಕ್ಕಾಗಿ ಅಳವಡಿಸಿಕೊಳ್ಳಲಾದ ಪೂರ್ವ ತಯಾರಿ ಹಾಗೂ ಮುಂದಿನ ಯೋಜನೆಯೊಂದಿಗೆ ಜಂಟಿ ನಿರ್ದೇಶಕರು ಇಲಾಖೆಯವರಿಗೆ ಅರ್ಜಿ ಸಲ್ಲಿಸಿ ಸರ್ವಾನುಮತಿ ಪಡೆದು ಸಪ್ಟೆಂಬರ್ 15 ರಿಂದ ಕಾಲೇಜು ಪ್ರಾರಂಭಿಸಲು ಕ್ರಮ ವಹಿಸುವುದು.


Previous Post Next Post