ಇಂದಿನಿಂದ ಮಂಗಳೂರು - ಕಾಸರಗೋಡು ಬಸ್ ಸಂಚಾರ ಪುನರಾರಂಭ
ಕೇರಳದಲ್ಲಿ ಕೊರೋನಾ ಇಳಿಮುಖವಾದ ಹಿನ್ನೆಲೆಯಲ್ಲಿ ಕರ್ನಾಟಕ ಪ್ರವೇಶಕ್ಕೆ ಆರ್ ಟಿಪಿಸಿಆರ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯವನ್ನು ಹಿಂತೆಗೆದುಕೊಳ್ಳಲಾಗಿದೆ.
ಕಾಸರಗೋಡಿಗರು ಶಿಕ್ಷಣ, ಉದ್ಯೋಗ, ವೈದ್ಯಕೀಯ ಚಿಕಿತ್ಸೆ ಹಾಗೂ ವ್ಯಾಪಾರ ವಹಿವಾಟುಗಳಿಗೆ ಹೆಚ್ಚಾಗಿ ಮಂಗಳೂರನ್ನೇ ಅವಲಂಬಿಸಿದ್ದಾರೆ. ಆದ್ದರಿಂದ ಮಂಗಳೂರಿಗೆ ಬಸ್ ಸಂಚಾರ ಆರಂಭಗೊಂಡಿರುವುದು ಕಾಸರಗೋಡಿಗರಿಗೆ ಸಾಕಷ್ಟು ಅನುಕೂಲವಾಗಲಿದೆ.