ರಾಜ್ಯದಲ್ಲಿ ಕೊರೊನ, ಒಮಿಕ್ರೋನ್ ಅಬ್ಬರ, ಇಂದು ಸಂಜೆ 6ಕ್ಕೆ ತಜ್ಞರೊಂದಿಗೆ ಸಿಎಂ ಮಹತ್ವದ ಸಭೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊಒರನಾ ತಡೆಗೆ ಬೇಕಾದ ಕ್ರಮಕೈಗೊಳ್ಳಲು ಇಂದು ಸಂಜೆ 6 ಗಂಟೆಗೆ ತಜ್ಞರ ಜೊತೆಗೆ ಮಹತ್ವದ ಸಭೆ ನಡೆಸಲಾಗುತ್ತದೆ. ಸಭೆಯಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ ಎಂದರು.
ಕೊರೊನಾ, ಒಮಿಕ್ರಾನ್ ಎರಡನ್ನು ನಾವು ಗಮನಿಸಿದ್ದೇವೆ. ದೇಶದಲ್ಲಿ, ನೆರೆ ರಾಜ್ಯಗಳಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ.ನಮಗೆ ಕೊರೊನಾ 2 ನೇ ಅಲೆ ಅನುಭವವಿದೆ. ಹೀಗಾಗಿ ಜನಜೀವನಕ್ಕೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ಜನರು ಕೂಡ ಕೊರೊನಾ ನಿಯಮಗಳನ್ನು ಪಾಲಿಸಬೇಕು ಎಂಧರು.