ಸಚಿವ ಉಮೇಶ್ ಕತ್ತಿ ವಿಧಿವಶ: ಬೆಳಗಾವಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಮತ್ತು ಸರಕಾರಿ ಕಚೇರಿಗಳಿಗೆ ಇಂದು ರಜೆ ಘೋಷಣೆ

ಸಚಿವ ಉಮೇಶ್ ಕತ್ತಿ ವಿಧಿವಶ: ಬೆಳಗಾವಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಮತ್ತು ಸರಕಾರಿ ಕಚೇರಿಗಳಿಗೆ ಇಂದು ರಜೆ ಘೋಷಣೆ 

ಬೆಳಗಾವಿ
: ಆಹಾರ ಇಲಾಖೆಯ ಸಚಿವ ಉಮೇಶ್ ಕತ್ತಿ (61) ವಿಧಿವಶ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಇಂದು ಬುಧವಾರ ರಜೆ ಘೋಷಿಸಲಾಗಿದೆ. ಬೆಳಗಾವಿ ಜಿಲ್ಲೆಯ ಸರ್ಕಾರಿ ಕಚೇರಿಗಳಿಗೂ ರಜೆ ಘೋಷಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ.

ಸಚಿವ ಉಮೇಶ್ ಕತ್ತಿ ನಿಧನದ ಸುದ್ದಿ ತಿಳಿದು ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ, ಬಾಗೇವಾಡಿಗೆ ಕೊಂಡೊಯ್ದು 5 ಗಂಟೆಗೆ ಅವರ ತೋಟದಲ್ಲಿ‌ ಅಂತಿಮ ವಿಧಿ ವಿಧಾನ ನಡೆಸಲಾಗುತ್ತೆ. ಸಕಲ ಸರ್ಕಾರಿ ಗೌರವಗಳನ್ನ ನೀಡಲು‌ ನಿರ್ಧರಿಸಿದ್ದೇವೆ. ಬುಧವಾರ ಬೆಳಗಾವಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಎಂದು ಘೋಷಿಸಿದರು.

أحدث أقدم