ಕರ್ನಾಟಕ ವಿಧಾನಸಭಾ ಚುನಾವಣೆ: ನಾಳೆ ಸಂಜೆ ಆರು ಗಂಟೆಗೆ ಅಭ್ಯರ್ಥಿಗಳ ಬಹಿರಂಗ ಪ್ರಚಾರಕ್ಕೆ ತೆರೆ

ಕರ್ನಾಟಕ ವಿಧಾನಸಭಾ ಚುನಾವಣೆ: ನಾಳೆ ಸಂಜೆ ಆರು ಗಂಟೆಗೆ ಅಭ್ಯರ್ಥಿಗಳ ಬಹಿರಂಗ ಪ್ರಚಾರಕ್ಕೆ ತೆರೆ


ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಮೇ 10ರಂದು ನಡೆಯಲಿದ್ದು, ಮೇ 13ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಅಬ್ಬರದ ಪ್ರಚಾರ ನಡೆಯುತ್ತಿದೆ.

ಮೇ.8ರಂದು ನಾಳೆ ಸಂಜೆ 6 ಗಂಟೆಗೆ ರಾಜ್ಯಾಧ್ಯಂತ ಅಭ್ಯರ್ಥಿಗಳ ಬಹಿರಂಗ ಚುನಾವಣಾ ಪ್ರಚಾರಕ್ಕೆ ತೆರೆ ಬೀಳಲಿದೆ. ಮೇ.8ರ ಸಂಜೆ 6ಗಂಟೆಯ ಬಳಿಕ ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ಮಾಡಬೇಕಿದೆ ಎಂದು ರಾಜ್ಯ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಹೇಳಿದ್ದಾರೆ.ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ರಾಜ್ಯ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಅವರು, ಮೇ.8ರಂದು ಸಂಜೆ 6 ಗಂಟೆಗೆ ರಾಜ್ಯಾಧ್ಯಂತ ಅಭ್ಯರ್ಥಿಗಳ ಬಹಿರಂಗ ಚುನಾವಣಾ ಪ್ರಚಾರಕ್ಕೆ ತೆರೆ ಬೀಳಲಿದೆ. ಮೇ.8ರ ಸಂಜೆ 6ಗಂಟೆಯ ಬಳಿಕ ಮನೆ ಮನೆಗೆ ಭೇಟಿ ನೀಡಿ, ಮತಯಾಚನೆ ಮಾಡಬೇಕಿದೆ ಎಂದರು.


ಮೇ 9, 10 ರಂದು ಬಸ್ ಸಂಚಾರದಲ್ಲಿ ವ್ಯತ್ಯಯ


ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ, ಚುನಾವಣಾ ಆಯೋಗದಿಂದ ಸುಗಮ ಮತದಾನಕ್ಕಾಗಿ ಪೊಲೀಸರು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳನ್ನು ಕರೆದೊಯ್ಯಲು ಸಾರಿಗೆ ಬಸ್ ಬಳಸಿಕೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ ಮೇ.9 ಮತ್ತು 10ರಂದು ಕೆ ಎಸ್ ಆರ್ ಟಿ ಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಮಾಹಿತಿ ನೀಡಲಾಗಿದೆ. ದಿನಾಂಕ 10-05-2023ರಂದು ವಿಧಾನಸಭಾ ಚುನಾವಣೆಗೆ ಕೆ ಎಸ್ ಆರ್ ಟಿಸಿಯಿಂದ ಚುನಾವಣಾ ಕಾರ್ಯದ ಸಲುವಾಗಿ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳನ್ನು ಜಿಲ್ಲಾಡಳಿತಕ್ಕೆ ಮತ್ತು ಪೊಲೀಸ್ ಇಲಾಖೆಗೆ ನಿಯೋಜಿಸಲಾಗಿದೆ ಎಂದು ತಿಳಿಸಿದೆ.


ಮತದಾನ ಕಾರ್ಯದ ಸುಗಮ ನಡೆಗಾಗಿ ಸಾರಿಗೆ ಬಸ್ ಗಳನ್ನು ಮತಗಟ್ಟೆ ಸಿಬ್ಬಂದಿ, ಪೊಲೀಸರನ್ನು ಕೊಂಡೊಯ್ಯಲು ಸಾರಿಗೆ ಬಸ್ ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಳಕೆ ಮಾಡಲಾಗುತ್ತಿದೆ. ಅದುದರಿಂದ ದಿನಾಂಕ 09-05-2023 ಮತ್ತು ಮತದಾನ ನಡೆಯುವಂತ ದಿನಾಂಕ 10-05-2023ರಂದು ನಿಗಮದ ವಾಹನಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗುತ್ತದೆ ಎಂದಿದೆ.ಮತದಾನಕ್ಕೂ ಮುನ್ನಾ ದಿನವಾದಂತ ಮೇ.9 ಮತ್ತು ಮತದಾನದ ದಿನವಾದ ಮೇ.10ರಂದು KSRTC ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕ ಪ್ರಯಾಣಿಕರು ಸಹಕರಿಸುವಂತೆ, ಪರ್ಯಾಯ ವ್ಯವಸ್ಥೆಯೊಂದಿಗೆ ಸಂಚರಿಸಲು ವಿನಂತಿಸಿದೆ.

Previous Post Next Post